
ಮಂಡ್ಯ: ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಹುಚ್ಚ ವೆಂಕಟ್ ಕಬ್ಬಿನ ಜ್ಯೂಸ್ ಕುಡಿದು ಹಣ ನೀಡದೆ ರಂಪಾಟ ಮಾಡಿದ್ದ ಮತ್ತು ಜ್ಯೂಸ್ ಅಂಗಡಿಯವನ ಮೇಲೆ ಕೈ ಮಾಡಿದ್ದಾನೆ. ಈ ವೇಳೆ ಹಲ್ಲೆಗೆ ಮುಂದಾಗಿದ್ದ ವೆಂಕಟ್ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ. ವೆಂಕಟ್ ಕಳೆದ ಎರಡ್ಮೂರು ದಿನಗಳಿಂದ ಶ್ರೀರಂಗಪಟ್ಟಣದಲ್ಲೇ ಅಲೆದಾಡುತ್ತಿದ್ದಾನೆ.
ಕಳೆದ ದಿನವಷ್ಟೆ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಹುಚ್ಚನಂತೆ ಅಲೆದಾಡುತ್ತಿದ್ದ ವೆಂಕಟ್ನನ್ನು ಸ್ಥಳೀಯರು ಗುರುತಿಸಿದ್ದರು. ಇದೀಗ ಜ್ಯೂಸ್ ಕುಡಿದು ಹಣ ನೀಡದೆ ಹಲ್ಲೆಗೆ ಮುಂದಾಗಿದ್ದ ವೆಂಕಟ್ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ.